ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಒಂದೇ ಗ್ರಾಮದ 128 ಜನರಿಗೆ ಕೋವಿಡ್ ಸೋಂಕು

Share

ಚಿಕ್ಕಮಗಳೂರು, ಮೇ 17; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಜನರಲ್ಲಿ ಆತಂಕವನ್ನು ತಂದೊಡ್ಡಿದೆ. ಕೋವಿಡ್ ಸೋಂಕು ನಗರ ಪ್ರದೇಶಗಳು ಮಾತ್ರವಲ್ಲ ಹಳ್ಳಿಗಳಿಗೆ ಸಹ ಹಬ್ಬಿದೆ. ಚಿಕ್ಕಮಗಳೂರಿನಲ್ಲಿ ಒಂದೇ ಗ್ರಾಮದ 128 ಜನರಿಗೆ ಸೋಂಕು ದೃಢಪಟ್ಟಿದೆ.

ಚಿಕ್ಕಮಗಳೂರು ತಾಲೂಕಿನ ಇಂದಿರಾನಗರದಲ್ಲಿ 128 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಅನಾರೋಗ್ಯದಿಂದ ಗ್ರಾಮದ ವ್ಯಕ್ತಿ ಆಸ್ಪತ್ರೆ ಸೇರಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶವವನ್ನು ಹಸ್ತಾಂತರ ಮಾಡಲಾಗಿತ್ತು.

ಹೃದಯಾಘಾತ ಸಾವು ಎಂಬ ಕಾರಣಕ್ಕೆ ಅಂತ್ಯಸಂಸ್ಕಾರದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಅಂತ್ಯಸಂಸ್ಕಾರ ಪೂರ್ಣಗೊಳ್ಳುತ್ತಿದ್ದಂತೆ ಪರೀಕ್ಷೆ ಬರೆದಿ ಬಂದಿದ್ದು, ಮೃತ ವ್ಯಕ್ತಿಗೆ ಕೋವಿಡ್ ಸೋಂಕು ಇತ್ತು ಎಂಬ ಅಂಶ ಬಯಲಾಗಿದೆ.