ಕೋಡಿಹಳ್ಳಿ ಚಂದ್ರಶೇಖರ್‌ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್

Share

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಾನೂನುಬಾಹಿರವಾಗಿ ಮುಷ್ಕರ ನಡೆಸಿ ಸಂಸ್ಥೆಗೆ ನಷ್ಟವನ್ನುಂಟು ಮಾಡಿದ ಆರೋಪದಡಿ ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ 17 ಮಂದಿ ವಿರುದ್ಧ ವಿಲ್ಸನ್‌ ಗಾರ್ಡನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಎಂಟಿಸಿ ಭದ್ರತಾ ಮತ್ತು ಜಾಗೃತ ಶಾಖೆಯ ವಿಭಾಗೀಯ ಭದ್ರತಾ ನಿರೀಕ್ಷಕ ಕೆ.ಎಂ. ಮುನಿಕೃಷ್ಣ ದೂರು ನೀಡಿದ್ದಾರೆ. ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ, ಅಕ್ರಮ ಕೂಟ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿಗೆ ಹಾನಿ, ಅಪರಾಧಕ್ಕೆ ಕುಮ್ಮಕ್ಕು, ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.