ಕೆ ಎಸ್ ಆರ್ ಟಿ ಸಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧ

Share

ಗದಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕೆ.ಎಸ್.ಆರ್. ಟಿ.ಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಿದ್ದವಾಗಿದ್ದು, ಸರ್ಕಾರಿ ನೌಕರರಂತೆ ಪರಿಗಣಿಸಲು ಕಷ್ಟ ಸಾಧ್ಯ. ತಕ್ಷಣ ಮುಷ್ಕರದಿಂದ ಹಿಂದೆ ಸರಿದು, ಕರ್ತವ್ಯಕ್ಕೆ ಹಾಜರಾಗಬೇಕು. ವಿನಾಕಾರಣ ಸಾರ್ವಜನಿರಿಗೆ ಆಗುತ್ತಿರುವ ಸಾರಿಗೆ ತೊಂದರೆಯನ್ನು ತಪ್ಪಿಸಬೇಕು.

ನೌಕರರ ಬೇಡಿಕೆಗಳಿಗೆ ಸರ್ಕಾರ ಒಪ್ಪಿದ್ದು, ಮುಕ್ತ ಮನಸ್ಸಿನಿಂದ ಸೇವೆ ಮಾಡಬೇಕು. ಕೋಡಿಹಳ್ಳಿ ಚಂದ್ರಶೇಖರ್ ಅವರು ನೌಕರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೌಕರರು ಇವರ ಮಾತಿಗೆ ಬೆಲೆಕೊಡಬೇಡಿ. ನೌಕರಿಗೆ ತೊಂದರೆ ಮಾಡಿಕೊಳ್ಳಬಾರದು ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಮನವಿ ಮಾಡಿದ್ದಾರೆ.