ಡಯಟ್ ತರಬೇತಿ ಕಾರ್ಯಕ್ರಮ ಉದ್ಘಾಟನೆ.

Share

ಗದಗ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಜಿಲ್ಲೆಯ ಸರಕಾರಿ ಮತ್ತು ಅನುದಾನಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪ್ರೇರಣಾ ಕಾರ್ಯಾಗಾರ ಕಾರ್ಯಕ್ರಮವನ್ನ ಜಿಲ್ಲಾಧಿಕಾರಿಕಾರಿ ಸುಂದರೇಶ ಬಾಬು ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ಕೆ.ಆನಂದ, ವಿಶ್ರಾಂತ ಉಪನಿದೇಶಕ ಸಂಗಪ್ಪ ಹಳಿಂಗಳಿ, ಬಸವಲಿಂಗಪ್ಪ, ಡಯಟ್ ಪ್ರಾಚಾರ್ಯ ಎಸ್.ಡಿ.ಗಾಂಜಿ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಜರಿದ್ದರು.