ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಉರುಸು

Share


ಗದಗ: ಹಿಂದೂ-ಮುಸ್ಲಿಂರ ಭಾವೈಕ್ಯತೆ ಬೆಸೆಯುವ ಕೋಟೆ ನಾಡಿನ ಗದಗ ಜೆಲ್ಲೆಯ ಗಜೇಂದ್ರಗಡ ಬೆಟ್ಟದ ಮೇಲಿರುವ ಐತಿಹಾಸಿಕ ಹಜರತ್ ಸೈಯ್ಯದ ಶಹಾ ಮೆಹಬೂಬ ಸುಬ್ಹಾನಿ ಅವರ ಉರುಸು ಅಪಾರ ಭಕ್ತ ಸಮೂಹದ ಮಧ್ಯೆ ಅದ್ದೂರಿ ಹಾಗೂ ಸಂಭ್ರಮದಿಂದ ನಡೆಯಿತು.

ಹಲವಾರು ರೋಗ ರುಜಿನಗಳ ನಿವಾರಕ ಶಕ್ತಿ ಹೊಂದಿದ ಅಸಂಖ್ಯಾತ ಭಕ್ತರ ಆರಾಧ್ಯ ದೈವ ಎನಿಸಿರುವ ಹಜರತ್ ಮೆಹಬೂಬ ಸುಬ್ಹಾನಿ
ಅವರ ಭಾವೈಕ್ಯತಾ ಉರುಸಗೆ ಬೆರಳಣಿಕೆಯಲ್ಲಿ ಆಗಮಿಸಿದ ಭಕ್ತರು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ದೇವರಿಗೆ ಹರಕೆ, ಪೂಜೆ ಸಲ್ಲಿಸಿ ಭಕ್ತಿಯ ಪರಾಕಾಷ್ಟೆ ಮೆರೆದರು. ಸಮಿತಿ ಸದಸ್ಯರು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದ್ದರು.