ಕರ್ನಾಟಕ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿ ಎಚ್ ನಾಗರಾಜ್ ಅಧಿಕಾರ ಸ್ವೀಕಾರ

Share

ಧಾರವಾಡ, ಜೂನ 26: ಕರ್ನಾಟಕ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿ ಮೈಸೂರು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಎಚ್. ನಾಗರಾಜ್ ಅಧಿಕಾರ ವಹಿಸಿಕೊಂಡಿದ್ದಾರೆ

ಕರ್ನಾಟಕ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ. ರವೀಂದ್ರ ನಾಥ್ ಕದಂ ಅವರನ್ನು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯಕ್ಕೆ ಮರಳಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಪ್ರೊ. ಎಚ್. ನಾಗರಾಜ್ ನಿಯೋಜನೆಗೊಂಡಿದ್ದಾರೆ.

ಕರ್ನಾಟಕ ವಿಶ್ವ ವಿದ್ಯಾಲಯ ನನ್ನ ಮಾತೃಸಂಸ್ಥೆ. ನಾನು ಇಲ್ಲಿಯೇ ಪಿಜಿ ಓದಿದ್ದೇನೆ. ಧಾರವಾಡ ಅಂಜುಮನ್ ಕಾಲೇಜು, ಕೊಪ್ಪಳ ಸರ್ಕಾರಿ ಕಾಲೇಜು ಸೇರಿದಂತೆ ಹಲವೆಡೆ ಸೇವೆ ಸಲ್ಲಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯದಲ್ಲಿ  ನಾನಾ ಹುದ್ದೆಗಳನ್ನು ನಿರ್ವಹಿಸಿದ ತೃಪ್ತಿ ಇದೆ ಎಂದಿದ್ದಾರೆ.

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿನ ಸಮಸ್ಯೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತೇನೆ. ರಾಜ್ಯದಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯವನ್ನು ಮಾದರಿ ವಿಶ್ವ ವಿದ್ಯಾಲಯವನ್ನಾಗಿ ಮಾಡುವದು ನನ್ನ ಬಯಕೆ ಆಗಿದೆ ಎಂದು ಹೇಳಿದರು.