ಕಲಬುರಗಿ ಕೇಂದ್ರೀಯ ವಿವಿ ವಿಶ್ರಾಂತ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ ನಿಧನ
ಧಾರವಾಡ, ಜೂನ 13: ಇಲ್ಲಿನ ಕಲ್ಯಾಣ ನಗರ ನಿವಾಸಿಯಾಗಿದ್ದ ಕಲಬುರಗಿ ಕೇಂದ್ರೀಯ ವಿವಿ ವಿಶ್ರಾಂತ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ (65) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಸೋಮವಾರ ಮಧ್ಯಾಹ್ನ ಕರ್ನಾಟಕ ವಿವಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಇತ್ತೀಚೆಗಷ್ಟೇ ಮಹೇಶ್ವರಯ್ಯ ಕೋವಿಡ್ನಿಂದ ಗುಣಮುಖರಾಗಿದ್ದರು. ಆದರೆ ಇಂದು ಪತ್ನಿ ಖ್ಯಾತ ಭಾಷಾ ಶಾಸ್ತ್ರಜ್ಞೆ ಪ್ರೊ.ರಾಜೇಶ್ವರಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಮೂಲತಃ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ನಿವಾಸಿಯಾಗಿರುವ ಅವರು, ಕರ್ನಾಟಕ ವಿವಿ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು. ಕಲಬುರಗಿ ಕೇಂದ್ರ ವಿವಿ ಕುಲಪತಿ ಹುದ್ದೆಯಿಂದ ಇತ್ತೀಚೆಗೆ ನಿವೃತ್ತಿಯಾದ ಬಳಿಕ ಧಾರವಾಡದಲ್ಲಿ ವಾಸವಾಗಿದ್ದರು.