ಯೋಗೇಶ್ವರ್ ಪರೀಕ್ಷೆ ಫಲಿತಾಂಶ ಬಂದಿದೆ: ಪ್ರಹ್ಲಾದ್ ಜೋಶಿ

Share

ಧಾರವಾಡ, ಜೂನ 27: ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೊತ್ತಿಲ್ಲ, ಪ್ರಧಾನಿ ತೀರ್ಮಾನಿಸಿದಾಗ ವಿಸ್ತರಣೆಯಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಅದು ಮೊದಲೇ ಗೊತ್ತಾಗುವುದಿಲ್ಲ. ಹಾಗಾಗಿ, ನಾನು ಉತ್ತರಿಸಲು ಅರ್ಹನಲ್ಲ ಎಂದರು.

ಪರೀಕ್ಷೆಯ ಫಲಿತಾಂಶಕ್ಕೆ ಕಾಯುತ್ತಿದ್ದೇವೆ ಎಂಬ ಸಿ.ಪಿ‌. ಯೋಗೀಶ್ವರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯೋಗೇಶ್ವರ್ ಯಾವ ವಿವಿಯಲ್ಲಿ ಪರೀಕ್ಷೆ ಬರೆದಿದ್ದಾರೋ ಅದರ ಕುಲಪತಿ ಅರುಣ್ ಸಿಂಗ್ ಉತ್ತರ ಕೊಟ್ಟಿದ್ದಾರೆ ಎಂದು ಕುಟುಕಿದರು.