ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ

Share

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಸರಕಾರಿ ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನ ಕೊಠಡಿ ನಿರ್ಮಾಣಕ್ಕಾಗಿ ತೋಡಿದ್ದ ಗುಂಡಿಯ ನೀರಿನಲ್ಲಿ ಬಿದ್ದು ಮೂರು ಮಕ್ಕಳು ಮುಳುಗಿ ಸಾವನ್ನಪ್ಪಿದ ಘಟನೆ ಕುರಿತು ಟ್ವೀಟ್ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಘಟನೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೃತರಾದ ಮಕ್ಕಳ ಪೋಷಕರಿಗೆ ತಲಾ 5 ಲಕ್ಷ ರೂ ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ರೀತಿ ದುರ್ಘಟನೆಗಳು ನಡೆಯದಂತೆ ಜಾಗೃತೆ ವಹಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.