‘ಕಿಸಾನ್ ರೈಲ್​ಗೆ’ ಸಿಎಂ ಹಸಿರು ನಿಶಾನೆ

Share

ಬೆಂಗಳೂರು,ಜೂನ 29: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿರುವ ‘ಕಿಸಾನ್ ರೈಲು ಯೋಜನೆ’ಗೆ ರಾಜ್ಯದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಹಸಿರು ನಿಶಾನೆ ತೋರಿಸಿದ್ದಾರೆ.

ಯಲಹಂಕದ ರೈಲ್ವೆ ಸ್ಟೇಷನ್​ನಲ್ಲಿ ಕಿಸಾನ್ ರೈಲು ಯೋಜನೆಗೆ ಸಿಎಂ ಬಿಎಸ್​ ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಕೃಷಿ ಉತ್ಪನ್ನಗಳನ್ನ ಸುಗಮವಾಗಿ ಸಾಗಾಣಿಕೆ ಮಾಡಲು ಈ ರೈಲು ಯೋಜನೆ ಸಹಕಾರಿಯಾಗಲಿದೆ.

ಅನ್ನದಾತ ರೈತರು ಬೆಳೆದ ಬೆಳೆಗೆ ಉತ್ತಮ ಮೌಲ್ಯ ಒದಗಿಸುವ ನಿಟ್ಟಿನಲ್ಲಿ ‘ಕಿಸಾನ್ ರೈಲು’ ಮಹತ್ವದ ಪಾತ್ರ ವಹಿಸುತ್ತಿದ್ದು, ನಮ್ಮ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರುತ್ತೇನೆ ಎಂದರು.