ಜನ ವಿರೋಧ ನೀತಿ ಖಂಡಿಸಿ ಬೆಂ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ

Share

ಬೆಂಗಳೂರು: ಇಂದು ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮೌರ್ಯ ಸರ್ಕಲ್ ಬಳಿ ಇರುವ ಗಾಂಧಿ ಪ್ರತಿಮೆಯ ಮುಂದೆ ರಾಜ್ಯ ‌ಸರ್ಕಾರದ ಜನ ವಿರೋಧ ನೀತಿ, ವಿದ್ಯುತ್ ದರ ಏರಿಕೆ, ನೀರಿ ದರ ಹೆಚ್ಚಳ ಹಾಗೂ ಆಸ್ತಿ ತೆರಿಗೆ ಏರಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ‌ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ.ಹರಿಪ್ರಸಾದ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕ ರಿಜ್ವಾನ್ ಹರ್ಷದ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎಂ ನಾರಾಯಣಸ್ವಾಮಿ, ಮಾಜಿ‌ ಸಂಸದ ಉಗ್ರಪ್ಪ ಮೂರು ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ರಾಜಕುಮಾರ್, ಜಿ ಶೇಖರ್, ಜಿ. ಕೃಷ್ಣಪ್ಪ ಸೇರಿ ಹಲವರು ಭಾಗಿಯಾಗಿದ್ದರು.