ಬಸ್, ಬೈಕ್ ಡಿಕ್ಕಿ: ಇಬ್ಬರು ಸಾವು

Share

ರಾಣೆಬೆನ್ನೂರ: ತಾಲೂಕಿನ ಚೌಡಯ್ಯನದಾನಪುರ ಕ್ರಾಸ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಜಗದೀಶ ದೀಪಾಳಿ(28) ಹಾಗೂ ಹನುಮಂತ ದೀಪಾಳಿ(60) ಮೃತ ದುರ್ದೈವಿಗಳು. ಘಟನೆ ಕುರಿತು ರಾಣೆಬೆನ್ನೂರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.