ಸಾಲಬಾಧೆ: ರೈತ ಆತ್ಮಹತ್ಯೆ

Share

ರಾಣೆಬೆನ್ನೂರ: ಸಾಲಬಾಧೆಯಿಂದ ಮರಕ್ಕೆ ನೇಣು ಬಿಗಿದುಕೊಂಡು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.

ಶಂಭಣ್ಣ ಬರಮಪ್ಪ ಬಾತಿ (58) ಆತ್ಮಹತ್ಯೆ ಮಾಡಿಕೊಂಡ ಮೃತ ರೈತ. ಇವರಿಗೆ ಒಂದು ಎಕರೆ ಕೃಷಿ ಜಮೀನಿದ್ದು, ಸರಕಾರಿ ಬ್ಯಾಂಕ್ ಸೇರಿ ಖಾಸಗಿಯಾಗಿ ಸುಮಾರು ₹5 ಲಕ್ಷ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.