ಅ.26 ರಂದು ಉಚಿತ ನೇತ್ರ ತಪಾಸಣಾ ಶಿಬಿರ

Share

ಹಾವೇರಿ: ಜಿಲ್ಲೆಯ ಸವಣೂರ ತಾಲೂಕ ವೈಧ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ. ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಅಮ್ಮಾ ಸಂಸ್ಥೆ ಹಿರೇಮುಗದೂರ ಹಾಗೂ ಕರ್ನಾಟಕ ರಾಜ್ಯ ವೃತ್ತಿಪರ ಶಿಕ್ಷಣ ಪದವೀಧರರ ಸಂಘ ಹಾವೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 26 ರ ಶನಿವಾರದಂದು ಜಿಲ್ಲೆಯ ಸವಣೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ 1 ಘಂಟೆಯವರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ನೇತ್ರದಾನ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸದುಪಯೋಗವನ್ನು ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಮ್ಮಾ ಸಂಸ್ಥೆಯ ಉಪಾಧ್ಯಕ್ಷ ಗುರುಪಾದಪ್ಪ ಬಾಳಮ್ಮನವರ ಪ್ರಕಟಣೆಗೆ ತಿಳಿಸಿದ್ದಾರೆ.