ಶಿವರಾತ್ರಿಗೆ ಸಡಗರದ ಸಿದ್ಧತೆ: ವಿಶೇಷ ಪೂಜೆ, ರಾತ್ರಿಯಿಡೀ ಜಾಗರಣೆ
ಸವಣೂರು: ನಗರದ ಬುಧವಾರ ಪೇಟೆಯಲ್ಲಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಮಹಾ ಶಿವರಾತ್ರಿ ಆಚರಣೆ ಹಾಗೂ ಅಹೋರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶುಕ್ರವಾರ ರಾತ್ರಿ ಈಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಶ್ರೀಗಳ ಸಾನಿಧ್ಯದಲ್ಲಿ ಜರಗುವ ಕಾರ್ಯಕ್ರಮವನ್ನು ಸವಣೂರ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ ಮೆಣಸಿನಕಾಯಿ ಉದ್ಘಾಟಿಸಲಿದ್ದಾರೆ ಎಂದು ಸೇವಾ ಸಮಿತಿ ಅಧ್ಯಕ್ಷ ಪಾಂಡುಗೌಡ ಗುಡಿಸಾಗರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.