ಸರ್ಕಾರದ ಕರೋನಾ ಪರಿಹಾರ ನಿಧಿಗೆ ದೇಣಿಗೆ

Share

ಸವಣೂರ : ಪ್ರಖ್ಯಾತ ಸವಣೂರ ಶಿವಲಾಲ್ ಖಾರಾ ಮಾಲೀಕ ಜಯಂತ ಕೋಟಕ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೋವಿಡ್-೧೯ ನಿಧಿಗೆ 50,000 ರೂಗಳ ಪ್ರತ್ಯೇಕ ಚಕ್ಕನ್ನು ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಮೂಲಕ ದೇಣಿಗೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಜಯಂತ್ ಕೋಟಕ್ ನೋವೆಲ್ ಕೊರೊನಾ ಸೋಂಕು ತಡೆಗಟ್ಟಲು ದೇಶಾದ್ಯಂತ ಮೇ 3 ರ ವರೆಗೆ ಲಾಕ್ ಡೌನ್ ವಿಸ್ತರಣೆಗೊಂಡಿರುವ ಹಿನ್ನೆಲೆಯಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರ ಜೊತೆಗೆ ಅಡುಗೆಯಲ್ಲಿ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಪದಾರ್ಥಗಳನ್ನು ಬಳಸಿದಲ್ಲಿ ಆರೋಗ್ಯ ರಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡ ಮಲ್ಲಾರಪ್ಪ ತಳ್ಳಿಹಳ್ಳಿ ಇದ್ದರು.