ಅಗಲಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಗೆ ಭಾವಪೂರ್ಣ ಶ್ರದ್ಧಾಂಜಲಿ

Share

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಅಗಲಿದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರಿಗೆ ಪುಷ್ಪಾರ್ಚಣೆಯ ಮೂಲಕ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ ಮಾತನಾಡಿ, ಅರುಣ್ ಜೇಟ್ಲಿ ತಮ್ಮ ಅವಧಿಯಲ್ಲಿ ಪಕ್ಷ ಸಂಘಟನೆ ಹಾಗೂ ರಾಷ್ಟ್ರ ಚಟುವಟಿಕೆಯ ಕಾರ್ಯದಲ್ಲಿ ಅತ್ಯಂತ ಉತ್ಸಾಹದಿಂದ ಹಾಗೂ ಇತರಿಗೆ ಮಾದರಿ ಯಾಗುವ ರೀತಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿ ರಾಷ್ಟ್ರದ ಅಭಿವೃದ್ದಿಗೆ ಶ್ರಮಿಸಿದರು. ಕಳೆದ ಲೋಕಸಭೆಯ ಅವಧಿಯಲ್ಲಿ ವಿತ್ತ ಸಚಿವರಾಗಿ ಜಿ.ಎಸ್.ಟಿ ಜಾರಿಗೆ ತರುವ ಮೂಲಕ ರಾಷ್ಟ್ರದ ಆರ್ಥಿಕ ಅಭಿವೃದ್ದಿಗೆ ಶ್ರಮಿಸಿದರು. ಅವರ ತತ್ವ ಆದರ್ಶಗಳನ್ನು ನಾವೆಲ್ಲರು ಮೈಗುಡಿಸಿಕೊಂಡು ಪಕ್ಷದ ಹಾಗೂ ರಾಷ್ಟ್ರದ ಅಭಿವೃದ್ದಿಗೆ ಶ್ರಮಿಸಬೇಕು ಎಂದರು.

ನಗರ ಘಟಕದ ಅಧ್ಯಕ್ಷ ನಿರಂಜನ ಹೇರೂರ ಮಾತನಾಡಿ, ಅರುಣ್ ಜೇಟ್ಲಿ ರಾಷ್ಟ್ರ ಕಂಡಂತಹ ದಿಮಂತ ವ್ಯಕ್ತಿಯಾಗಿದ್ದು, ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಅವರು ಪಕ್ಷಕ್ಕೆ ಹಾಗೂ ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಕಾಲಿಕ ಮರಣ ಅಪಾರ ನೂವನ್ನು ಉಂಟು ಮಾಡಿದೆ ಎಂದರು.
ಜೇಟಿ ನಿಧನಕ್ಕೆ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಸಂತಾಪ ವ್ಯಕ್ತಪಡಿಸಿದ್ದರಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಮಂಡಲಗಳ, ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.