ಅವಿರೋಧ ಆಯ್ಕೆ

Share

ಹಾವೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಾಗರಾಜ ಕುರುವತ್ತೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಂಘದ ಸದಸ್ಯರ ಸಭೆಯಲ್ಲಿ ಅವಿರೋಧ ಆಯ್ಕೆ ಘೋಷಿಸಲಾಯಿತು.