ಆಹಾರ ಧಾನ್ಯ ಕಿಟ್ ವಿತರಣೆ

Share

ಹಾವೇರಿ: ಕೋವಿಡ್ 19 ಲಾಕ್‍ಡೌನ್ ಕಾರಣದಿಂದ ತೊಂದರೆಯಲ್ಲಿರುವ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿರುವ ಕಾರ್ಮಿಕರಿಗೆ ವಿತರಣೆ ಮಾಡಲು ಸರ್ಕಾರದಿಂದ ನಾಲ್ಕು ಸಾವಿರ ಕಿಟ್‍ಗಳು ಬಂದಿದ್ದು, ವಿವಿಧ ಕ್ಷೇತ್ರದ ಕಾರ್ಮಿಕರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಆಹಾರ ಕಿಟ್ ವಿತರಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಗೆ ಬಂದಿರುವ ನಾಲ್ಕು ಸಾವಿರ ಕಿಟ್‍ಗಳ ಪೈಕಿ ಈಗಾಗಲೇ 400 ಕಿಟ್ ವಿತರಣೆ ಮಾಡಲಾಗಿದೆ. ಇನ್ನುಳಿದ ಕಿಟ್‍ಗಳನ್ನು ಇನ್ನೆರಡು ದಿನಗಳಲ್ಲಿ ಅರ್ಹರಿಗೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಇಂದು ಪೌರ ಕಾರ್ಮಿಕರಿಗೆ, ಛಾಯಾಗ್ರಾಹಕರಿಗೆ, ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ಕಾರ್ಮಿಕರಿಗೆ, ಮಹಿಳಾ ಟೈಲರ್ ಗಳಿಗೆ ಹಾಗೂ ಇತರ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಹಾವೇರಿ ತಹಶೀಲ್ದಾರ್ ಶಂಕರ್ ಜಿ.ಎಸ್, ನಗರಸಭೆ ಆಯುಕ್ತ ಬಸವರಾಜ ಜಿದ್ದಿ, ನಗರ ಸಭೆ ನಾಮನಿರ್ದೇಶಿತ ಸದಸ್ಯ ಶಿವರಾಜ ಮತ್ತಿಹಳ್ಳಿ, ಸವಣೂರ ತಾಲೂಕ ಪಂಚಾಯತ್ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ, ಬಾಬುಸಾಬ್ ಮೋಮಿನಗಾರ, ಶ್ರೀಕಾಂತ ಪೂಜಾರ, ಮಂಜುನಾಥ ಮಡಿವಾಳರ, ಲಲಿತಾ ಗುಂಡೇನಹಳ್ಳಿ, ಚಂದ್ರಪ್ಪ ಕ್ಯಾತಣ್ಣನವರ, ನಗರಸಭೆ ಸದಸ್ಯರಾದ ಗಿರೀಶ ತುಪ್ಪದ, ನಾಗರಾಜ ಹಿರೇಮಠ, ರಾಜು ಕನವಳ್ಳಿ, ಮಂಜು ಇಟಗಿ ಸೇರಿದಂತೆ ಮತ್ತಿತರರು ಇದ್ದರು.