ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಜೂನ್ 9: ರಾಜ್ಯದ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ರಾಜ್ಯ ಸರ್ಕಾರ ಹೊರಡಿಸಿದೆ. ಹಾವೇರಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಕೆ.ಜೆ ದೇವರಾಜ್ಅವರನ್ನು ಸಿಐಡಿ ಎಸ್ಪಿಯಾಗಿ ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಹನುಮಂತರಾಯ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ.
ಸರ್ಕಾರ ವರ್ಗಾವಣೆಗೊಳಿಸಿರುವ ೧೨ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ಸಿಡಿಐ ಎಸ್ಪಿಯಾಗಿ ರವಿ ಡಿ.ಚನ್ನಣ್ಣನವರ್ ವರ್ಗಾವಣೆ, ಮೈಸೂರು ಎಸ್ಪಿಯಾಗಿ ಆರ್.ಚೇತನ್ ವರ್ಗಾವಣೆ, ಕಾರ್ತಿಕ್ ರೆಡ್ಡಿ ಎಸ್ಪಿ, ವೈರ್ಲೆಸ್, ಬೆಂಗಳೂರು, ರಾಹುಲ್ ಕುಮಾರ್ ಶಹಾಪುರ್ವಾಡ್, ತುಮಕೂರು ಎಸ್ಪಿ, ಹನುಮಂತರಾಯ, ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ, ಡಾ.ಎ.ಎನ್ ಪ್ರಕಾಶ್ ಗೌಡ, ಆಂತರಿಕ ಭದ್ರತಾ ವಿಭಾಗದ ಎಸ್ಪಿ, ಕೆ.ಜೆ ದೇವರಾಜ್, ಸಿಐಡಿ ಎಸ್ಪಿ, ಸಿ.ಬಿ ರಿಷ್ಯಂತ್, ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ, ಕಿಶೋರ್ ಬಾಬು, ಕೋಲಾರ ಪೊಲೀಸ್ ವರಿಷ್ಠಾಧಿಕಾರಿ.