ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಹತ್ತಿಮತ್ತೂರ ಸಂತೆ ಮುಂದೂಡಿಕೆ

Share

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ದ್ರೈವಾರ್ಷಿಕ ಚುನಾವಣೆ ಮತದಾನ ಅಕ್ಟೋಬರ್ 28 ರಂದು ಜಿಲ್ಲೆಯಲ್ಲಿ ನಡಯಲಿದೆ. ಶಾಂತಿಯುತ ಮತದಾನಕ್ಕಾಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸವಣೂರ ತಾಲೂಕು ಹತ್ತಿಮತ್ತೂರ ಗ್ರಾಮದಲ್ಲಿ ಅಕ್ಟೋಬರ್ 28 ರಂದು ನಡೆಯುವ ಸಂತೆಯನ್ನು ಮುಂದೂಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.