ಕೊರೊನಾ ವಾರಿಯರ್ಸ್ ಗೆ ಸನ್ಮಾನ

Share

ಹಾವೇರಿ: ನಗರದ ಬಸವಕೇಂದ್ರ ಹೊಸಮಠದಲ್ಲಿ ಸೋಮವಾರ ಮುರುಘೇಂದ್ರ ಶಿವಯೋಗಿಗಳ ಜಯಂತಿ ಅಂಗವಾಗಿ ಬಸವಶಾಂತಲಿಂಗ ಶ್ರೀ ನೇತೃತ್ವದಲ್ಲಿ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಕೊರೊನಾ ವಾರಿಯರ್ಸ್ ಅವರನ್ನು ಸನ್ಮಾನಿಸಲಾಯಿತು. ಭಾರತ ಮತ್ತು ಚೀನಾ ಯುದ್ಧ ಸಂದರ್ಭದಲ್ಲಿ ಹುತಾತ್ಮರಾದ ಯೋಧರಿಗೆ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.