ಕೌಟುಂಬಿಕ ಕಲಹ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಶರಣು
ಹಾವೇರಿ : ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತುಂಗಭದ್ರಾ ನದಿಗೆ ಜಿಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮೂಲದ ಪ್ರಕಾಶ್ ನಾಯಕ (32) ಮತ್ತು ಭಾರತಿ ಬಾಯಿ (25) ಮೃತ ದಂಪತಿ. ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.