ಕೌಟುಂಬಿಕ ಕಲಹ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಶರಣು

Share

ಹಾವೇರಿ : ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತುಂಗಭದ್ರಾ ನದಿಗೆ ಜಿಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಚಾರಗಟ್ಟಿ ಗ್ರಾಮದ ಬಳಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಮೂಲದ ಪ್ರಕಾಶ್​ ನಾಯಕ (32) ಮತ್ತು ಭಾರತಿ ಬಾಯಿ (25) ಮೃತ ದಂಪತಿ. ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.