ಪೂರ್ವ ಭಾವಿ ಸಭೆ ನಾಳೆ

Share

ಹಾವೇರಿ: ತಾಲೂಕಿನ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಇದೇ ಡಿ.24 ಮತ್ತು 25 ರಂದು ಜರಗುವ ಪಂಚಪೀಠಗಳಲ್ಲಿ ಒಂದಾದ ಕೇದಾರಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಧರ್ಮ ಸಂರಕ್ಷಣೆಯ ಸಮಾರಂಭ ಜರಗುವುದು. ಅದರ ಹಿನ್ನಲೆಯಲ್ಲಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸುವುದರ ಸಲುವಾಗಿ ದಿ.16ರ ಸೋಮವಾರ ಸಂಜೆ 7 ಕ್ಕೆ ಮಠಾಧ್ಯಕ್ಷರಾದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಮಠದಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿದೆ. ಆದ ಕಾರಣ ಶ್ರೀಮಠದ ಸದ್ಭಕ್ತರು ಧರ್ಮಾಭಿಮಾನಿಗಳು ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಳ್ಳಲಬೇಕೆಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.