ಸಂತಕವಿ ಸರ್ವಜ್ಞ ಜಯಂತಿ ಆಚರಣೆ

Share

ಹಾವೇರಿ: ನಗರದ ದೇವರಾಜ ಅರಸು ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುಂಬಾರ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತಿಯನ್ನು ಆಚರಿಸಲಾಯಿತು.

ದೀಪ ಬೆಳಗಿಸುವುದರೊಂದಿಗೆ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ ಕಾರ್ಯಕ್ರಮ ಉದ್ಘಾಟಿಸಿದರು. ಕರಡಿಗುಡ್ಡದ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ನಂದೀಶ ಕಾಖಂಡಕಿ ಉಪನ್ಯಾಸ ನೀಡಿದರು. ಕುಂಬಾರ ಸಂಘದ ಜಿಲ್ಲಾಧ್ಯಕ್ಷ ರೇವಣಪ್ಪ ಚಕ್ರಸಾಲಿ, ಹಾವೇರಿ ಭ್ರಷ್ಟಾಚಾರ ನಿಗ್ರಹ ದಳದ ಸೋಮಲಿಂಗ ಹೂಗಾರ, ಹಾವೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಸೇರಿದಂತೆ ಇತರರು ಇದ್ದರು.

https://youtu.be/ah0AZfKAwa0