ಕೆರೆಯಲ್ಲಿ ಈಜಲು ಹೋದ ಬಾಲಕ ನಾಪತ್ತೆ

Share

ಹಾವೇರಿ: ತಾಲೂಕಿನ ನೆಗಳೂರ ಗ್ರಾಮದ ಕೋಡಿ ದುರಗಮ್ಮ ದೇವಿ ದೇವಸ್ಥಾನದ ಹಿಂಭಾಗದ ಕೆರೆ (ಬಾಂದಾರ)ಯಲ್ಲಿ ಈಜಲು ಹೋದ ಬಾಲಕ ನಾಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ.

ಗ್ರಾಮದ ಆಕಾಶ ಮಂಜುನಾಥ ಹೆಸರೂರ ನಾಪತ್ತೆಯಾಗಿರುವ ಬಾಲಕ. ಸ್ನೇಹಿತರೊಂದಿಗೆ ಈಜಲು ಬಂದಾರಕ್ಕೆ ಹೋದಾಗ ಘಟನೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಆಗ್ನಿ ಶಾಮಕ ದಳದ ಸಿಬ್ಬಂದಿ ಬಾಲಕನ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಗುತ್ತಲ ಪೂಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.