ಹಿಂಬಡ್ತಿ ಖಂಡಿಸಿ ಶಿಕ್ಷಕರ ಪ್ರತಿಭಟನೆ

Share

ಹಿರೇಕೆರೂರ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸೇವಾ ನಿರತ ಪದವೀಧರ ಶಿಕ್ಷಕರ ಹಿಂಬಡ್ತಿ ಖಂಡಿಸಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಪಟ್ಟಣದ ಬಿಇಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರಕಾರ 2017 ರಲ್ಲಿ ರೂಪಿಸಿರುವ ಸಿ‌ ಮತ್ತು ಆರ್ (ವೃಂದ ನೇಮಕಾತಿ) ನಿಯಮಾವಳಿ ಪ್ರಕಾರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು 1 ರಿಂದ 5 ನೇ ತರಗತಿ ಶಿಕ್ಷಕರನ್ನಾಗಿ ಪರಿಗಣಿಸಿ ಹಿಂಬಡ್ತಿ ನೀಡಲಾಗಿದೆ.ಹೀಗಾಗಿ ಆದಷ್ಟು ಬೇಗ ಸಮಸ್ಯೆಯನ್ನು ಸರಕಾರಿ ಪರಹರಿಸಬೇಕೆಂದು ಮೇಲಾಧಿಕಾರಿಗಳ‌ ಮೂಲಕ ಸರಕಾರಕ್ಕೆ ಮನವಿ ಮಾಡಲಾಯಿತು. ಧರಣಿಯಲ್ಲಿ ಸೇವಾನಿರತ ಪದವೀಧರ ಶಿಕ್ಷಕರು ಸೇರಿದಂತೆ ಇತರರು ಭಾಗವಹಿಸಿದ್ದರು.