ಅ.25 ರಂದು ಹಾವೇರಿಯಲ್ಲಿ “ಮತ್ತೆ ಕಲ್ಯಾಣ” ಕಾರ್ಯಕ್ರಮ

Share

ಹಾವೇರಿ: ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಅ.25 ರ ಭಾನುವಾರ ಸಾತೇನಹಳ್ಳಿ ತರಳಬಾಳು ಜಗದ್ಗುರು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಸಾನಿದ್ಯದಲ್ಲಿ “ಕಲ್ಯಾಣದೆಡೆಗೆ ನಮ್ಮ ನಡಿಗೆ” ಆಶಯದ ಅಡಿಯಲ್ಲಿ ಸಹಮತ ವೇದಿಕೆ ವತಿಯಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮ ಜರುಗಲಿದೆ.

ಹುಕ್ಕೇರಿಮಠದ ಸದಾಶಿವ ಶ್ರೀಗಳ ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಬೆ.11 ಗಂಟೆಗೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿದೆ. ಸಂಜೆ 4:30 ಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡ ಸಾಮರಸ್ಯ ನಡಿಗೆ ಸಾಗಲಿದೆ.

ಸಂಜೆ 6 ಗಂಟೆಗೆ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಕಲಬುರ್ಗಿ ವಿಶ್ರಾಂತ ಪ್ರಾಧ್ಯಾಪಕ ಡಾ. ಬಸವರಾಜ ಸಬರದ ‘ಶರಣರ ಧಾರ್ಮಿಕ ಪ್ರಸ್ತುತತೆ’ ಕುರಿತು ಹಾಗೂ ಹೊನ್ನಾವರ ಲೇಖಕಿ ಡಾ. ಎಚ್.ಎಸ್. ಅನುಪಮ ‘ಇಂದಿನ ಬೇನೆಗೆ ಅಂದಿನ ಮದ್ದು’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ.