ಆಗಸ್ಟ್ 31 ರಂದು ಮುಖ್ಯಮಂತ್ರಿಗಳಿಂದ ಹಾವೇರಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ

Share

ಹಾವೇರಿ: ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 31 ರಂದು ಪ್ರವಾಹ ಪೀಡಿತ ಜಿಲ್ಲೆಯ ಆಯ್ದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಆಗಸ್ಟ್ 31ರ ಮಧ್ಯಾಹ್ನ 1-15ಕ್ಕೆ ಕಾರವಾರ ಜಿಲ್ಲೆಯ ಮಾಳದೇವಿ ಮೈದಾನ ಹೆಲಿಪ್ಯಾಡ್‍ನಿಂದ ಪ್ರಯಾಣ ಬೆಳೆಸಿ 2 ಗಂಟೆಗೆ ಹಾವೇರಿ ಕೆ.ಎಲ್.ಇ. ಕೊಳ್ಳಿ ಪಾಲಿಟೆಕ್ನಿಕ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. 2 ರಿಂದ 4-30ರವರೆಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಪ್ರದೇಶಗಳಿಗೆ ಹಾಗೂ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಸಕರು, ಸಂಸದರೊಂದಿಗೆ ಚರ್ಚಿಸಲಿದ್ದಾರೆ. ಸಂಜೆ 4-30ಕ್ಕೆ ಹಾವೇರಿ ಹೆಲಿಪ್ಯಾಡ್‍ನಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.