ಎಸಿಬಿ ಬಲೆಗೆ ಕೋಣನಕೇರಿ ಪಿಡಿಓ ಪದ್ಮಾವತಿ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಕೋಣನಕೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೂರೂವರೆ ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪದ್ಮಾವತಿ ಕಮ್ಮಾರ ಅವರು ಭದ್ರಾಪೂರ ಗ್ರಾಮದ ಮಹಾಂತೇಶ ರಾಮನಕೊಪ್ಪ ಎಂಬುವರ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಪಡೆಯಲು ಎನ್ಒಸಿ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಡಿವೈಎಸ್ಪಿ ಸೋಮಲಿಂಗ ನೇತೃತ್ವದಲ್ಲಿ ದಾಳಿ ನಡೆದಿತ್ತು. ಲಂಚಪಡೆಯುತ್ತಿದ್ದ ವೇಳೆ ಪಿಡಿಒ ಪದ್ದವ್ವ ಉರುಫ್ ಪದ್ಮಾವತಿ ಕಮ್ಮಾರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಕುರಿತು ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.