ಕೊರೋನಾ ಮುನ್ನೆಚ್ಚರಿಕೆ: ಆರ್.ಟಿ.ಓ. ಕಚೇರಿಯಲ್ಲಿ ಎಲ್.ಎಲ್/ ಡಿ.ಎಲ್. ಅರ್ಜಿ ಸ್ವೀಕಾರ ಸ್ಥಗಿತ

Share

ಹಾವೇರಿ: ಕೊರೋನಾ (ಕೋವಿಡ್-19) ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಹಿಸುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಹೆಚ್ಚಿನ ಜನದಟ್ಟಣೆ ನಿರ್ಬಂಧಿಸಲು ರಾಜ್ಯ ಸಾರಿಗೆ ಆಯುಕ್ತರ ಆದೇಶದನ್ವಯ ಮಾರ್ಚ್ 20 ರಿಂದ ಮುಂದಿನ ಆದೇಶದವರೆಗೆ ಹೊಸದಾಗಿ ಕಲಿಕಾ ಚಾಲನ ಅನುಜ್ಞಾ ಪತ್ರ ಮತ್ತು ಚಾಲನಾ ಅನುಜ್ಞಾ ಪತ್ರಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಸುವುದು ಹಾಗೂ ಪರೀಕ್ಷೆಗೆ ಹಾಜರಾಗುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಏಪ್ರಿಲ್ 15 ರವರೆಗೆ ಸಿಂಧುತ್ವ ಹೊಂದಿರುವ ಅಭ್ಯರ್ಥಿಗಳಿಗೆ ಹೊಸ ಚಾಲನ ಅನುಜ್ಞಾ ಪತ್ರ್ರ ಪರೀಕ್ಷೆಗೆ ಮಾತ್ರ ಹಾಜರಾಗುವ ಅವಕಾಶವಿರುತ್ತದೆ ಎಂದು ರಾಣೇಬೆನ್ನೂರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.