ಜಾಗೃತಿ ಕರಪತ್ರ ಹಂಚಿಕೆ

Share

ಹಾವೇರಿ: ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳ ಮೇಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ/ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೋಲುವಂತಹ ಲಾಂಛನ ಹಾಗೂ ಹೆಸರುಗಳನ್ನು ಬಳಸಿಕೊಂಡು ಖಾಸಗಿ ಸಂಸ್ಥೆಗಳಿಗೆ, ಬ್ಯಾಂಕ್ ಹಾಗೂ ಇತರೆ ಸಹಕಾರಿ ಸಂಘ-ಸಂಸ್ಥೆಗಳು ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವ ಕುರಿತು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹಾವೇರಿ ಶಹರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಸಾರ್ವಜನಿಕರನ್ನು ವಂಚಿಸುತ್ತಿರುವ ಕುರಿತು ಸಾರ್ವಜನಿಕವಾಗಿ ಸೂಕ್ತ ತಿಳುವಳಿಕೆ ಮೂಡಿಸಲಾಗಿದೆ ಹಾಗೂ ಕರಪತ್ರಗಳನ್ನು ಹಂಚಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.