ಜಿಲ್ಲೆಯಲ್ಲಿ ಅತಿವೃಷ್ಠಿ ಹಿನ್ನಲೆ ಅ.26, 27 ರ ಸಾರ್ವಜನಿಕ ರಜೆ ರದ್ದು: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ

Share

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಸಾರ್ವಜನಿಕ ಆಸ್ತಿಗಳು, ಮೂಲಭೂತ ಸೌಕರ್ಯಗಳು ಹಾಗೂ ಬೆಳೆ ಮತ್ತು ಮನೆಗಳು ಹಾನಿಯಾಗಿದ್ದರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದ್ದರಿಂದ ಸಾರ್ವತ್ರಿಕ ರಜಾ ದಿನವಾದ ನಾಲ್ಕನೇ ಶನಿವಾರ ದಿನಾಂಕ 26-10-2019 ಹಾಗೂ ದಿನಾಂಕ 27-10-2019 ರಂದು ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ.