ಜಿಲ್ಲೆಯ ಆಡೂರಿನ 21 ಜನರು ಕ್ವಾರಟೈನ್

Share

ಹಾವೇರಿ: ಕೊರೊನಾ ಸೋಂಕಿತರ ಜತೆ ಸಂಪರ್ಕ ಹೊಂದಿದ್ದ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದ 21 ಜನರನ್ನು ಜಿಲ್ಲಾಡಳಿತ ಕ್ವಾರಂಟೈನ್‍ಗೆ ಒಳಪಡಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ವಿಜಯಪುರ ಜಿಲ್ಲೆಯ ಕೊರೊನಾ ಸೋಂಕಿತರಿಬ್ಬರು (ಸೋಂಕಿತರ ಸಂಖ್ಯೆ 306 ಮತ್ತು 308) ಏ.5 ರಂದು ಆಡೂರಿನ ತಮ್ಮ ಸಂಬಂಧಿಕರ ಮನೆಗೆ ಬಂದು ಊಟ ಮಾಡಿ ತೆರಳಿದ ಸಂಗತಿ ತಳಮಳಕ್ಕೆ ಕಾರಣವಾಗಿದೆ. ಈ ಇಬ್ಬರಿಗೂ ಶನಿವಾರ ಸೋಂಕು ದೃಢಪಟ್ಟಿದ್ದು, ಅವರ ಪ್ರಯಾಣದ ಮಾಹಿತಿ (ಟ್ರಾವೆಲ್ ಹಿಸ್ಟರಿ) ಆಧರಿಸಿ ಆಡೂರು ಗ್ರಾಮದ ಎರಡು ಕುಟುಂಬಗಳ ಎಲ್ಲ 21 ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಇವರ ಪೈಕಿ ಸದ್ಯಕ್ಕೆ ಯಾರಲ್ಲೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಪಡಿಸಿರುವ ಆರೋಗ್ಯ ಇಲಾಖೆ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಸೋಮವಾರ ಅಥವಾ ಮಂಗಳವಾರ ವರದಿ ಕೈ ಸೇರುವ ನಿರೀಕ್ಷೆ ಇದೆ.