ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸುತ್ತೇವೆ: ಜಮೀರ್ ಅಹ್ಮದ್ ಖಾನ್

Share

ಬೆಂಗಳೂರು: ಟಿಪ್ಪು ಜಯಂತಿಯನ್ನು ಇನ್ನೂ ಅದ್ದೂರಿಯಾಗಿ ಆಚರಿಸುತ್ತೇವೆ. ಅದನ್ನು ಬಿಜೆಪಿ ಸರಕಾರವಲ್ಲ, ಯಾರೇ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಟಿಪ್ಪು ಜಯಂತಿ ರದ್ದುಪಡಿಸುವ ನಿರ್ಧಾರವನ್ನು ನೂತನ ಬಿಜೆಪಿ ಸರಕಾರ ಪ್ರಕಟಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಬಿಜೆಪಿ ಸರಕಾರ ಬಂದರೆ ಟಿಪ್ಪು ಜಯಂತಿ ರದ್ದು ಮಾಡುತ್ತದೆ ಅಂತ ನಮಗೆ ಗೊತ್ತಿತ್ತು. ಆದರೆ ಇಷ್ಟು ತರಾತುರಿಯಲ್ಲಿ ಮಾಡುತ್ತದೆ ಅಂತ ನಾನು ನಿರೀಕ್ಷಿಸಿರಲಿಲ್ಲ. ಇದರ ಕುರಿತು ಕ್ಯಾಬಿನೆಟ್‌ನಲ್ಲಿ ನಿರ್ಧಾರ ಆಗಬೇಕು. ಆದರೆ, ಕ್ಯಾಬಿನೆಟ್ ರಚನೆಯೇ ಆಗಿಲ್ಲವೆಂದು ಹೇಳಿದರು.

ಬಿಜೆಪಿ ಜತೆ ಗುರುತಿಸಿಕೊಂಡು ಅನರ್ಹಗೊಂಡಿರುವ ಶಾಸಕ ರೋಶನ್ ಬೇಗ್ ಈ ಬಗ್ಗೆ ಏನು ಹೇಳ್ತಾರೋ ನೋಡೋಣ ಎಂದು ಜಮೀರ್ ಸವಾಲು ಹಾಕಿದರು.