ಡಿ. ರೂಪಾಗೆ ಬಿಗ್​ ರಿಲೀಫ್​: ಮಾನನಷ್ಟ ಮೊಕದ್ದಮೆ ರದ್ದು

Share

ಬೆಂಗಳೂರು ಜೂನ್ 15: ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ಐಪಿಎಸ್​ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್​.ಎನ್​. ಸತ್ಯನಾರಾಯಣ ರಾವ್​ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಬುಧವಾರ ಹೈಕೋರ್ಟ್ ರದ್ದು ಪಡಿಸಿದೆ.

ರೂಪಾ ಅವರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಜತೆಗೆ, ಸರ್ಕಾರಿ ಅಧಿಕಾರಿಯೊಬ್ಬರು ಮತ್ತೋರ್ವ ಅಧಿಕಾರಿಯ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.