ತುಂತುರು ನೀರಾವರಿ ಹಾಗೂ ಹನಿ ನೀರಾವರಿ ಸೌಲಭ್ಯ ಪಡೆಯಲು ಸಲಹೆ

Share

ಹಾವೇರಿ: ಕೃಷಿ ಇಲಾಖೆಯ ಮುಖ್ಯಮಂತ್ರಿ-ಪ್ರಧಾನ ಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಕೃಷಿ ಬೆಳೆಗಳಿಗೆ ತುಂತುರು ನೀರಾವರಿ ಮತ್ತು ಹನಿ ನೀರಾವರಿ ಸೌಲಭ್ಯಗಳು ಲಭ್ಯವಿರುತ್ತದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯಗಳನ್ನು ಪಡೆಯಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.