ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

Share

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಮಿಶ್ ಷಾ ಸರಕಾರ ರಚಿಸಲು ದೂರವಾಣಿ ಮೂಲಕ ಸೂಚಿಸಿದ್ದು, ಇಂದು ರಾಜಭವನಕ್ಕೆ ತೆರಳಿ ಸರಕಾರ ರಚನೆಗೆ ಹಕ್ಕು ಒತ್ತಾಯ ಮಂಡಿಸಿ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡುವಂತೆ ರಾಜ್ಯಪಾಲರನ್ನು ಕೋರುವುದಾಗಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ತಮ್ಮ ಧವಳಗಿರಿ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿದ್ದು, ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯವಿಲ್ಲ. ಇಂದೇ ಮಧ್ಯಾಹ್ನ 12:30 ಕ್ಕೆ ಪ್ರಮಾಣವಚನ ಸ್ವೀಕರಿಸುವೆ ಎಂದರು.