ಬಿಎಸ್​ ಯಡಿಯೂರಪ್ಪ ವಚನ ಭಷ್ಟ್ರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Share

ಬೆಂಗಳೂರು: ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್​ ಸರಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಚನ ಭಷ್ಟ್ರರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ಬಿಜೆಪಿ ಸರಕಾರ ರದ್ದು ಮಾಡಿ ನೂತನ ಆದೇಶಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.

ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.