ರಾಣೇಬೆನ್ನೂರು ತಾಲೂಕು ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Share

ರಾಣೇಬೆನ್ನೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಣೇಬೆನ್ನೂ ರು ತಾಲೂಕಿನಲ್ಲಿ ನಡೆಯುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕ ಮತ್ತು ಬಾಲಕಿಯರ ಮೆಟ್ರಿಕ್ ಪೂರ್ವ ಸರಕಾರಿ ಹಾಗೂ ಅನುದಾನಿತ ವಸತಿ ನಿಲಯಗಳ ಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಜೂನ್ 15 ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಣೇಬೆನ್ನೂರು, ಅರೇಮಲ್ಲಾಪುರ, ಹರನಗಿರಿ, ಹಲಗೇರಿ, ಗುಡಗೂರು, ಕಾಕೋಳ, ಇಟಗಿ ಗ್ರಾಮದ ಡಿ.ದೇವರಾಜ ಅರಸು ಮೆ.ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ರಾಣೇಬೆನ್ನೂರ ನಗರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಸುಣಕಲ್ಲಬಿದರಿಯ ಮೂರು, ಹನುಮನಮಟ್ಟಿ, ದೇವರಗುಡ್ಡ, ಐರಣಿ, ರಾಣೇಬೆನ್ನೂರು ಹಾಗೂ ದೇವರಗು ಡ್ಡದಲ್ಲಿರುವ ಅನುದಾನಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಪ್ರವರ್ಗ-1, 2ಎ,2ಬಿ, 3ಎ,3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿ ಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳ ಕಚೇರಿ, ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಝರಾಕ್ಸ್ ಪ್ರತಿ, ಆಧಾರ ಕಾರ್ಡ್, ಬ್ಯಾಂಕ್ ಪುಸ್ತಕ ಝರಾಕ್ಸ್ ಸೇರಿದಂತ ಅಗತ್ಯ ದಾಖಲೆ ಯೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗಾಗಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳ ಕಚೇರಿ, ರಾಣೇಬೆನ್ನೂರ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08373-260188ನ್ನು ಸಂಪರ್ಕಿಸಬಹುದು.