ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Share

ಹಾವೇರಿ: ದೇವಗಿರಿಯಲ್ಲಿರುವ ವಿಜಯಾ ಬ್ಯಾಂಕ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ ಹಾವೇರಿ ಜಿಲ್ಲೆಯ ನಿರೂದ್ಯೋಗಿ ಯುವಕ/ಯುವತಿಯರಿಗೆ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ಅಕ್ಟೋಬರ್ 14 ರಿಂದ 23 ವರೆಗೆ ಆಯೋಜಿಸಲಾಗಿದೆ.

ಉಚಿತ ಊಟ ಮತ್ತು ವಸತಿಯೊಂದಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು ಹಾಗೂ ತರಬೇತಿ ಪಡೆಯಲು ಆಸಕ್ತಿ ಹೊಂದಿದ ನಿಮ್ಮ ಸ್ನೇಹತರನ್ನು ಕರೆತರಲು ಅವಕಾಶವನ್ನು ಕಲ್ಪಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ, ಪಡಿತರ ಚೀಟಿ, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಅಥವಾ ಶಾಲಾ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳೊಂದಿಗೆ ಲಗುತ್ತಿಸಿ ಅರ್ಜಿ ಸಲ್ಲಿಸಲು ಸಂಸ್ಥೆಯ ನಿರ್ದೇಶಕರು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ದೂರವಾಣಿ ಸಂಖ್ಯೆ : 08375-249160, ಮೊ: 9740377623 ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.